23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

Related posts

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya
error: Content is protected !!