28.5 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

ಬೆಳ್ತಂಗಡಿ: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ಇದರ ಆಪ್ತ ಸಮಾಲೋಚಕಿ ಮತ್ತು ಖ್ಯಾತ ಪ್ರೇರಕಿ ಪುತ್ತೂರಿನ ಡಾ. ವಾಜಿದ ಬಾನು ಅವರು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ NSS ವಿಭಾಗ ಮತ್ತು ಯೆನೆಪೋಯ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಆಯೋಜಿಸಲಾದ ಪ್ರತಿಷ್ಠಿತ ಅಂತರರಾಷ್ಟ್ರೀಯ ಜಾಗತಿಕ ಯುವ ಶೃಂಗಸಭೆ-2025 ರಲ್ಲಿ ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ.

18 ವಿವಿಧ ದೇಶಗಳಿಂದ 1200ಕ್ಕೂ ಹೆಚ್ಚು ಪ್ರತಿನಿಧಿಗಳ ಸಮ್ಮುಖದಲ್ಲಿ ಡಾ. ವಾಜಿದ ಬಾನು “ಐಡಿಯಾ ವರ್ಸ್: ಯೂತ್ ಇನ್ನೋವೇಶನ್ ಫಾರ್ ಎ ನ್ಯೂ ಇಂಡಿಯಾ” ಎಂಬ ವಿಷಯದ ಕುರಿತು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿ ವಿಚಾರವನ್ನು ಮಂಡಿಸಿದರು. ಅವರ ಭಾಷಣದಲ್ಲಿ ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಷನ್ ನ ಮೂಲ ಉದ್ದೇಶ, ಬೆಳವಣಿಗೆ ಮತ್ತು ದೃಷ್ಟಿಕೋನವನ್ನು ವಿವರಿಸಿದರು.

ಶಿಕ್ಷಣ ವ್ಯವಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ನೈಜ ಸವಾಲುಗಳನ್ನು ಪರಿಹರಿಸುವ ಒಂದು ಉಪಕ್ರಮವಾಗಿ ವಿದ್ಯಾರ್ಥಿ-ಕೇಂದ್ರಿತ ಅಪ್ಲಿಕೇಶನ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿದರು. ಮಾತ್ರವಲ್ಲದೆ ಶಿಕ್ಷಣದಲ್ಲಿ ಬೆಂಬಲ ವ್ಯವಸ್ಥೆಗಳನ್ನು ಮರು ವ್ಯಾಖ್ಯಾನಿಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಅವರ ಮಾತುಗಳು ತನ್ನ ನಾವೀನ್ಯತೆ ಮತ್ತು ಸ್ಪಷ್ಟತೆಗಾಗಿ, ಮನಸ್ಸುಗಳನ್ನು ಬೆಳಗಿಸಿದ್ದಕ್ಕಾಗಿ ಮತ್ತು ಪ್ರಪಂಚದಾದ್ಯಂತದ ಪ್ರತಿನಿಧಿಗಳಿಂದ ಕುತೂಹಲವನ್ನು ಹುಟ್ಟುಹಾಕಿದ್ದಕ್ಕಾಗಿ ಮೆಚ್ಚುಗೆ ಪಡೆಯಿತು. ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಧೈಯ ಮತ್ತು ಯುವ ಸಮುದಾಯವನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಅದು ತರುವ ಪರಿಹಾರದಿಂದ ಅನೇಕರು ಪ್ರಭಾವಿತರಾದರು. EEF ಗೆ ಈ ಹೆಮ್ಮೆಯ ಕ್ಷಣವನ್ನು ತಂದು ಕೊಟ್ಟ ಡಾ. ವಾಜಿದ ಬಾನು ರವರನ್ನು ಸಂಸ್ಥೆಯ ಅಧ್ಯಕ್ಷ ಅಮ್ಮದ್ ಖಾನ್ ಪೋಳ್ಯ ಅಭಿನಂದಿಸಿದ್ದಾರೆ.

Related posts

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya
error: Content is protected !!