September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

ಬೆಳ್ತಂಗಡಿ: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ಇದರ ಆಪ್ತ ಸಮಾಲೋಚಕಿ ಮತ್ತು ಖ್ಯಾತ ಪ್ರೇರಕಿ ಪುತ್ತೂರಿನ ಡಾ. ವಾಜಿದ ಬಾನು ಅವರು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ NSS ವಿಭಾಗ ಮತ್ತು ಯೆನೆಪೋಯ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಆಯೋಜಿಸಲಾದ ಪ್ರತಿಷ್ಠಿತ ಅಂತರರಾಷ್ಟ್ರೀಯ ಜಾಗತಿಕ ಯುವ ಶೃಂಗಸಭೆ-2025 ರಲ್ಲಿ ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ.

18 ವಿವಿಧ ದೇಶಗಳಿಂದ 1200ಕ್ಕೂ ಹೆಚ್ಚು ಪ್ರತಿನಿಧಿಗಳ ಸಮ್ಮುಖದಲ್ಲಿ ಡಾ. ವಾಜಿದ ಬಾನು “ಐಡಿಯಾ ವರ್ಸ್: ಯೂತ್ ಇನ್ನೋವೇಶನ್ ಫಾರ್ ಎ ನ್ಯೂ ಇಂಡಿಯಾ” ಎಂಬ ವಿಷಯದ ಕುರಿತು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿ ವಿಚಾರವನ್ನು ಮಂಡಿಸಿದರು. ಅವರ ಭಾಷಣದಲ್ಲಿ ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಷನ್ ನ ಮೂಲ ಉದ್ದೇಶ, ಬೆಳವಣಿಗೆ ಮತ್ತು ದೃಷ್ಟಿಕೋನವನ್ನು ವಿವರಿಸಿದರು.

ಶಿಕ್ಷಣ ವ್ಯವಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ನೈಜ ಸವಾಲುಗಳನ್ನು ಪರಿಹರಿಸುವ ಒಂದು ಉಪಕ್ರಮವಾಗಿ ವಿದ್ಯಾರ್ಥಿ-ಕೇಂದ್ರಿತ ಅಪ್ಲಿಕೇಶನ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿದರು. ಮಾತ್ರವಲ್ಲದೆ ಶಿಕ್ಷಣದಲ್ಲಿ ಬೆಂಬಲ ವ್ಯವಸ್ಥೆಗಳನ್ನು ಮರು ವ್ಯಾಖ್ಯಾನಿಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಅವರ ಮಾತುಗಳು ತನ್ನ ನಾವೀನ್ಯತೆ ಮತ್ತು ಸ್ಪಷ್ಟತೆಗಾಗಿ, ಮನಸ್ಸುಗಳನ್ನು ಬೆಳಗಿಸಿದ್ದಕ್ಕಾಗಿ ಮತ್ತು ಪ್ರಪಂಚದಾದ್ಯಂತದ ಪ್ರತಿನಿಧಿಗಳಿಂದ ಕುತೂಹಲವನ್ನು ಹುಟ್ಟುಹಾಕಿದ್ದಕ್ಕಾಗಿ ಮೆಚ್ಚುಗೆ ಪಡೆಯಿತು. ಎಜುಕೇಶನಲ್ ಎಕ್ಸೆಲೆನ್ಸ್ ಫೌಂಡೇಶನ್ ನ ಧೈಯ ಮತ್ತು ಯುವ ಸಮುದಾಯವನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸಲು ಅದು ತರುವ ಪರಿಹಾರದಿಂದ ಅನೇಕರು ಪ್ರಭಾವಿತರಾದರು. EEF ಗೆ ಈ ಹೆಮ್ಮೆಯ ಕ್ಷಣವನ್ನು ತಂದು ಕೊಟ್ಟ ಡಾ. ವಾಜಿದ ಬಾನು ರವರನ್ನು ಸಂಸ್ಥೆಯ ಅಧ್ಯಕ್ಷ ಅಮ್ಮದ್ ಖಾನ್ ಪೋಳ್ಯ ಅಭಿನಂದಿಸಿದ್ದಾರೆ.

Related posts

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಕ್ರಾಂತಿವೀರ ಉಬಾರ್ ಮಂಜ ಬೈದ್ಯರ ಸಂಸ್ಮರಣಾ ಸಮಿತಿ ರಚನೆ: ಮಂಜಯ್ಯ ಬೈದ್ಯ ರವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya
error: Content is protected !!