26.1 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

ಆರಂಬೋಡಿ: 2025-526ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಗೆ ವಿವಿಧ ಕೊಡುಗೆ ನೀಡಿದ ಗಣ್ಯರಿಗೆ ಅಭಿನಂದನೆ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.

ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು. ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಅಧ್ಯಕ್ಷ, ವಕೀಲರು ಸುರೇಶ್ ಶೆಟ್ಟಿ ಶಾಲೆಗೆ ಸೌಂಡ್ಸ್ ಸಿಸ್ಟಮ್ ಕೊಡುಗೆಯಾಗಿ ನೀಡಿದರು. ರಾಘವೇಂದ್ರ ಭಟ್ ಶಾಲಾ ಮಕ್ಕಳಿಗೆ ಛತ್ರಿ ವಿತರಿಸಿದರು.

ಮಂಜುಶ್ರೀ ಎಲೆಕ್ಟ್ರಾನಿಕ್ಸ್ ಮಾಲೀಕ ಗಣೇಶ್ ಪೂಜಾರಿ ಶಾಲಾ ನಲಿ ಕಲಿ ಮಕ್ಕಳಿಗೆ ಟೇಬಲ್ ಮತ್ತು ಕುರ್ಚಿ ನೀಡಿದರು. ಉದ್ಯಮಿ, ಕೃಷಿಕ ಕಿರಣ್ ಕುಮಾರ್ ಮಂಜಿಲ ಶಾಲಾ ಮಕ್ಕಳಿಗೆ ಸ್ಕ್ವಾಡ್ ಡ್ರೆಸ್ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಕೀಲರು ಸುರೇಶ್ ಶೆಟ್ಟಿ ಮತ್ತು ರಾಘವೇಂದ್ರ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಅಬುರ, ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಣೇಶ್ ಶೆಟ್ಟಿಗಾರ್, ಪ್ರಭಾಕರ್ ಮೈರಬೆಟ್ಟು, ಸೋಮನಾಥ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಸುಶೀಲ ಪ್ರಾಸ್ತಾವಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಲ್ಯಾಸ್ ಅಬ್ದುಲ್ ಹಕೀಂ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!