24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

ಆರಂಬೋಡಿ: 2025-526ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಗೆ ವಿವಿಧ ಕೊಡುಗೆ ನೀಡಿದ ಗಣ್ಯರಿಗೆ ಅಭಿನಂದನೆ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.

ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು. ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಅಧ್ಯಕ್ಷ, ವಕೀಲರು ಸುರೇಶ್ ಶೆಟ್ಟಿ ಶಾಲೆಗೆ ಸೌಂಡ್ಸ್ ಸಿಸ್ಟಮ್ ಕೊಡುಗೆಯಾಗಿ ನೀಡಿದರು. ರಾಘವೇಂದ್ರ ಭಟ್ ಶಾಲಾ ಮಕ್ಕಳಿಗೆ ಛತ್ರಿ ವಿತರಿಸಿದರು.

ಮಂಜುಶ್ರೀ ಎಲೆಕ್ಟ್ರಾನಿಕ್ಸ್ ಮಾಲೀಕ ಗಣೇಶ್ ಪೂಜಾರಿ ಶಾಲಾ ನಲಿ ಕಲಿ ಮಕ್ಕಳಿಗೆ ಟೇಬಲ್ ಮತ್ತು ಕುರ್ಚಿ ನೀಡಿದರು. ಉದ್ಯಮಿ, ಕೃಷಿಕ ಕಿರಣ್ ಕುಮಾರ್ ಮಂಜಿಲ ಶಾಲಾ ಮಕ್ಕಳಿಗೆ ಸ್ಕ್ವಾಡ್ ಡ್ರೆಸ್ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಕೀಲರು ಸುರೇಶ್ ಶೆಟ್ಟಿ ಮತ್ತು ರಾಘವೇಂದ್ರ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಅಬುರ, ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಣೇಶ್ ಶೆಟ್ಟಿಗಾರ್, ಪ್ರಭಾಕರ್ ಮೈರಬೆಟ್ಟು, ಸೋಮನಾಥ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಸುಶೀಲ ಪ್ರಾಸ್ತಾವಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಲ್ಯಾಸ್ ಅಬ್ದುಲ್ ಹಕೀಂ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು

Related posts

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya
error: Content is protected !!