37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿ ಆಂಧ್ರಪ್ರದೇಶ ಕಡಪಾದ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಅನುಪಮಾನಂದಜೀಯವರು ವಿವೇಕಾನಂದರ ಶಿಕ್ಷಣ ತತ್ವಗಳು ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಿ ವಿವೇಕಾನಂದರು ನಮಗೆ ಆದರ್ಶ ವ್ಯಕ್ತಿ. ಅವರ ವಿಚಾರಧಾರೆ, ಚಿಂತನೆ ಮತ್ತು ಬದುಕಿನ ಹಾದಿ ನಮಗೆ ಸ್ಫೂರ್ತಿ. ಆದುದರಿಂದ ವೈಚಾರಿಕ ಸ್ವಾವಲಂಬನೆ ನೀಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ದೇಶಾಭಿಮಾನ ಬೆಳೆಸುವುದರೊಂದಿಗೆ ಸರ್ವ ಸಮಸ್ಯೆಗೆ ಔಷಧಿಯಾಗಿದ್ದು ಸರ್ವತೋಮುಖ ಬೆಳವಣಿಗೆಗೆ ಸಾಧ್ಯವಾಗಿದೆ. ಶಿಕ್ಷಕರು ತಮ್ಮ ಶಿಕ್ಷಣ ವಿದ್ಯಾಲಯ ಮತ್ತು ಪಠ್ಯ ವಿಷಯದ ಬಗ್ಗೆ ಗೌರವವಿಟ್ಟು ಪ್ರತಿಯೊಬ್ಬವಿದ್ಯಾರ್ಥಿಗೂ ಮಹತ್ವ ನೀಡಿದಾಗ ವಿದ್ಯಾರ್ಥಿಯ ಬದುಕಿನ ಹಾದಿ ಸುಗಮವಾಗುತ್ತದೆ ಎಂದರು.

ಕ್ಯಾ. ಬೆಳ್ಳಾಲ ಗೋಪಿನಾಥ್ ಸ್ವಾಮಿ ವಿವೇಕಾನಂದರ ಬಗ್ಗೆ ಮತ್ತು ಶ್ರೀ ರಾಮಕೃಷ್ಣ ಆಶ್ರಮದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜೀಯವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ, ಶ್ರೀ. ಧ. ಮಂ. ವಸತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಇತರ ಅಂಗಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸಾಯಿಧೃತಿ ಸ್ವಾಮಿ ಅನುಪಮಾನಂದಜೀ ಯವರನ್ನು ಪರಿಚಯಿಸಿ, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ತೇಜಸ್ವಿನಿ ಕಾಯಕ್ರಮ ನಿರೂಪಿಸಿದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya
error: Content is protected !!