23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ದಿವ್ಯಶ್ರೀ ಸ್ವಸಹಾಯ ಸಂಘದ ಸದಸ್ಯರು ದೀಪ ಪ್ರಜ್ವಲಿಸುವುದರ ಮೂಲಕ ಒಕ್ಕೂಟ ಸಭೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ನಾರಾವಿ ವಲಯ ಜನಜಾಗ್ರತಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಎನ್. ನಾವರ, ಆಂತರಿಕ ಲೆಕ್ಕಪರಿಶೋಧಕ ಶೇಖರ, ಒಕ್ಕೂಟದ ಕಾರ್ಯದರ್ಶಿ ಎನ್. ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಳಿನಾಕ್ಷಿ, ಕೋಶಾಧಿಕಾರಿ ಹರೀಶ್ ಮೂಲ್ಯ, ಜನಜಾಗ್ರತಿ ಗ್ರಾಮ ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಎನ್ ವಿಜಯ ಕುಮಾರ್ ಜೈನ್ ಮಾತನಾಡಿ ಜೂ.14ರಂದು ಅಳದಂಗಡಿಯಲ್ಲಿ ನಡೆಯುವ ಸರಕಾರಿ ಕೆಲಸದಿಂದ ನಿವೃತ್ತರಾಗಿರುವ ಶಿವಪ್ರಸಾದ್ ಅಜಿಲರ ಪೌರ ಸನ್ಮಾನದ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿದ್ದಪ್ಪ ಮೂಲ್ಯ ಸ್ವಾಗತಿಸಿ, ವಂದಿಸಿದರು.

Related posts

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!