25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ದಿವ್ಯಶ್ರೀ ಸ್ವಸಹಾಯ ಸಂಘದ ಸದಸ್ಯರು ದೀಪ ಪ್ರಜ್ವಲಿಸುವುದರ ಮೂಲಕ ಒಕ್ಕೂಟ ಸಭೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ನಾರಾವಿ ವಲಯ ಜನಜಾಗ್ರತಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಎನ್. ನಾವರ, ಆಂತರಿಕ ಲೆಕ್ಕಪರಿಶೋಧಕ ಶೇಖರ, ಒಕ್ಕೂಟದ ಕಾರ್ಯದರ್ಶಿ ಎನ್. ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಳಿನಾಕ್ಷಿ, ಕೋಶಾಧಿಕಾರಿ ಹರೀಶ್ ಮೂಲ್ಯ, ಜನಜಾಗ್ರತಿ ಗ್ರಾಮ ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಎನ್ ವಿಜಯ ಕುಮಾರ್ ಜೈನ್ ಮಾತನಾಡಿ ಜೂ.14ರಂದು ಅಳದಂಗಡಿಯಲ್ಲಿ ನಡೆಯುವ ಸರಕಾರಿ ಕೆಲಸದಿಂದ ನಿವೃತ್ತರಾಗಿರುವ ಶಿವಪ್ರಸಾದ್ ಅಜಿಲರ ಪೌರ ಸನ್ಮಾನದ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿದ್ದಪ್ಪ ಮೂಲ್ಯ ಸ್ವಾಗತಿಸಿ, ವಂದಿಸಿದರು.

Related posts

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!