28.5 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.

ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ, ಸ್ನೇಹ, ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದರು.

ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಸಲೀಂ, ಗೌರವಾಧ್ಯಕ್ಷ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್, ಸಮಿತಿ ಸದಸ್ಯರು, ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.

ಸುನ್ನೀ ಬಾಲಸಂಘ SಃS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಸಿಹಿಯೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.

Related posts

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!