22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.

ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ, ಸ್ನೇಹ, ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದರು.

ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಸಲೀಂ, ಗೌರವಾಧ್ಯಕ್ಷ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್, ಸಮಿತಿ ಸದಸ್ಯರು, ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.

ಸುನ್ನೀ ಬಾಲಸಂಘ SಃS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಸಿಹಿಯೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.

Related posts

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya
error: Content is protected !!