ಧರ್ಮಸ್ಥಳ: ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೊಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಜೂ.7ರಂದು ಭೇಟಿ ನೀಡಿದರು.

ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಆಟೋ ಚಾಲಕ ದಿನೇಶ್ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಪಿ.ವಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.