23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!