22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶ್ರೀ ಗುರುದೇವ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!