28.5 C
ಪುತ್ತೂರು, ಬೆಳ್ತಂಗಡಿ
June 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

ಉಜಿರೆ: ಭಕ್ತಿಹೆಜ್ಜೆ ಬಳಗ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಒಗ್ಗೂಡುವಿಕೆಯಲ್ಲಿಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶರತ್‌ಕೃಷ್ಣ ಪಡುವೆಟ್ನಾಯರವರ ಮಾರ್ಗದರ್ಶನದಲ್ಲಿ ಭಜಕೆರೆ ಗೊಬ್ಬು-2025 ಭಜಕ ಸಮ್ಮಿಲನ & ಪ್ರತಿಭಾ ಪುರಸ್ಕಾರ ಇದರ ಸಮಾರೋಪ ಸಮಾರಂಭವು ಜೂ.8ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ಮಾತನಾಡಿ, ಸನಾತನ ಹಿಂದೂ ಧರ್ಮದಲ್ಲಿ ಭಜನೆ ಅತ್ಯಂತ ಮಹತ್ವಪೂರ್ಣ ಸ್ಥಾನವನ್ನು ವಹಿಸಿಕೊಂಡಿದೆ. ಭಜನೆ ದೇವರ ಮಹಿಮೆಗಳನ್ನು ಕೊಂಡಾಡುವ ಏಕೈಕ ಸಾಧನವಾಗಿದೆ ಎಂದರು.

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಘಟಕ ವಿ.ಹರೀಶ್ ನೆರಿಯ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಭಜಕ ಪುರುಷೋತ್ತಮ ಕೊಕ್ಕಡ,ಛತ್ರಪತಿ ಶಿವಾಜಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ,ಭಕ್ತಿ ಹೆಜ್ಜೆ ಬಳಗದ ಸಂಘಟಕ ಮಂಜುನಾಥ್ ಶೆಟ್ಟಿ ನಿಡಿಗಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿ ಸದಸ್ಯ ಸುಧಾಕರ್, ದೈಹಿಕ ಶಿಕ್ಷಕರಾದ ಮೋಹನ್, ಶಶಿಧರ್ ಬೆಳಾಲು ಉಪಸ್ಥಿತರಿದ್ದರು.

ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರದ ಅಧ್ಯಕ್ಷ ಜನಾರ್ಧನ ಸ್ವಾಗತಿಸಿದರು. ಸುರಕ್ಷಾ ಆಚಾರ್ಯ ಕನ್ನಾಜೆ ನಿರೂಪಿಸಿದರು.

Related posts

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
error: Content is protected !!