23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

ಉಜಿರೆ: ಭಕ್ತಿಹೆಜ್ಜೆ ಬಳಗ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಒಗ್ಗೂಡುವಿಕೆಯಲ್ಲಿಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶರತ್‌ಕೃಷ್ಣ ಪಡುವೆಟ್ನಾಯರವರ ಮಾರ್ಗದರ್ಶನದಲ್ಲಿ ಭಜಕೆರೆ ಗೊಬ್ಬು-2025 ಭಜಕ ಸಮ್ಮಿಲನ & ಪ್ರತಿಭಾ ಪುರಸ್ಕಾರ ಇದರ ಸಮಾರೋಪ ಸಮಾರಂಭವು ಜೂ.8ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ಮಾತನಾಡಿ, ಸನಾತನ ಹಿಂದೂ ಧರ್ಮದಲ್ಲಿ ಭಜನೆ ಅತ್ಯಂತ ಮಹತ್ವಪೂರ್ಣ ಸ್ಥಾನವನ್ನು ವಹಿಸಿಕೊಂಡಿದೆ. ಭಜನೆ ದೇವರ ಮಹಿಮೆಗಳನ್ನು ಕೊಂಡಾಡುವ ಏಕೈಕ ಸಾಧನವಾಗಿದೆ ಎಂದರು.

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಘಟಕ ವಿ.ಹರೀಶ್ ನೆರಿಯ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಭಜಕ ಪುರುಷೋತ್ತಮ ಕೊಕ್ಕಡ,ಛತ್ರಪತಿ ಶಿವಾಜಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ,ಭಕ್ತಿ ಹೆಜ್ಜೆ ಬಳಗದ ಸಂಘಟಕ ಮಂಜುನಾಥ್ ಶೆಟ್ಟಿ ನಿಡಿಗಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿ ಸದಸ್ಯ ಸುಧಾಕರ್, ದೈಹಿಕ ಶಿಕ್ಷಕರಾದ ಮೋಹನ್, ಶಶಿಧರ್ ಬೆಳಾಲು ಉಪಸ್ಥಿತರಿದ್ದರು.

ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರದ ಅಧ್ಯಕ್ಷ ಜನಾರ್ಧನ ಸ್ವಾಗತಿಸಿದರು. ಸುರಕ್ಷಾ ಆಚಾರ್ಯ ಕನ್ನಾಜೆ ನಿರೂಪಿಸಿದರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya
error: Content is protected !!