22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

ಉಜಿರೆ: ಭಕ್ತಿಹೆಜ್ಜೆ ಬಳಗ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಒಗ್ಗೂಡುವಿಕೆಯಲ್ಲಿಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶರತ್‌ಕೃಷ್ಣ ಪಡುವೆಟ್ನಾಯರವರ ಮಾರ್ಗದರ್ಶನದಲ್ಲಿ ಭಜಕೆರೆ ಗೊಬ್ಬು-2025 ಭಜಕ ಸಮ್ಮಿಲನ & ಪ್ರತಿಭಾ ಪುರಸ್ಕಾರ ಇದರ ಸಮಾರೋಪ ಸಮಾರಂಭವು ಜೂ.8ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ಮಾತನಾಡಿ, ಸನಾತನ ಹಿಂದೂ ಧರ್ಮದಲ್ಲಿ ಭಜನೆ ಅತ್ಯಂತ ಮಹತ್ವಪೂರ್ಣ ಸ್ಥಾನವನ್ನು ವಹಿಸಿಕೊಂಡಿದೆ. ಭಜನೆ ದೇವರ ಮಹಿಮೆಗಳನ್ನು ಕೊಂಡಾಡುವ ಏಕೈಕ ಸಾಧನವಾಗಿದೆ ಎಂದರು.

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಘಟಕ ವಿ.ಹರೀಶ್ ನೆರಿಯ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಭಜಕ ಪುರುಷೋತ್ತಮ ಕೊಕ್ಕಡ,ಛತ್ರಪತಿ ಶಿವಾಜಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ,ಭಕ್ತಿ ಹೆಜ್ಜೆ ಬಳಗದ ಸಂಘಟಕ ಮಂಜುನಾಥ್ ಶೆಟ್ಟಿ ನಿಡಿಗಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿ ಸದಸ್ಯ ಸುಧಾಕರ್, ದೈಹಿಕ ಶಿಕ್ಷಕರಾದ ಮೋಹನ್, ಶಶಿಧರ್ ಬೆಳಾಲು ಉಪಸ್ಥಿತರಿದ್ದರು.

ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರದ ಅಧ್ಯಕ್ಷ ಜನಾರ್ಧನ ಸ್ವಾಗತಿಸಿದರು. ಸುರಕ್ಷಾ ಆಚಾರ್ಯ ಕನ್ನಾಜೆ ನಿರೂಪಿಸಿದರು.

Related posts

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!