23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

ಉಜಿರೆ: ಭಕ್ತಿಹೆಜ್ಜೆ ಬಳಗ ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳ ಒಗ್ಗೂಡುವಿಕೆಯಲ್ಲಿಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಶರತ್‌ಕೃಷ್ಣ ಪಡುವೆಟ್ನಾಯರವರ ಮಾರ್ಗದರ್ಶನದಲ್ಲಿ ಭಜಕೆರೆ ಗೊಬ್ಬು-2025 ಭಜಕ ಸಮ್ಮಿಲನ & ಪ್ರತಿಭಾ ಪುರಸ್ಕಾರ ಇದರ ಸಮಾರೋಪ ಸಮಾರಂಭವು ಜೂ.8ರಂದು ಉಜಿರೆಯ ಶಾರದಾ ಮಂಟಪದಲ್ಲಿ ನಡೆಯಿತು.

ಮುಖ್ಯ ಅತಿಥಿ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ಮಾತನಾಡಿ, ಸನಾತನ ಹಿಂದೂ ಧರ್ಮದಲ್ಲಿ ಭಜನೆ ಅತ್ಯಂತ ಮಹತ್ವಪೂರ್ಣ ಸ್ಥಾನವನ್ನು ವಹಿಸಿಕೊಂಡಿದೆ. ಭಜನೆ ದೇವರ ಮಹಿಮೆಗಳನ್ನು ಕೊಂಡಾಡುವ ಏಕೈಕ ಸಾಧನವಾಗಿದೆ ಎಂದರು.

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಘಟಕ ವಿ.ಹರೀಶ್ ನೆರಿಯ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಹಿರಿಯ ಭಜಕ ಪುರುಷೋತ್ತಮ ಕೊಕ್ಕಡ,ಛತ್ರಪತಿ ಶಿವಾಜಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ,ಭಕ್ತಿ ಹೆಜ್ಜೆ ಬಳಗದ ಸಂಘಟಕ ಮಂಜುನಾಥ್ ಶೆಟ್ಟಿ ನಿಡಿಗಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿ ಸದಸ್ಯ ಸುಧಾಕರ್, ದೈಹಿಕ ಶಿಕ್ಷಕರಾದ ಮೋಹನ್, ಶಶಿಧರ್ ಬೆಳಾಲು ಉಪಸ್ಥಿತರಿದ್ದರು.

ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರದ ಅಧ್ಯಕ್ಷ ಜನಾರ್ಧನ ಸ್ವಾಗತಿಸಿದರು. ಸುರಕ್ಷಾ ಆಚಾರ್ಯ ಕನ್ನಾಜೆ ನಿರೂಪಿಸಿದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!