24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

ಆರಂಬೋಡಿ: 2025-526ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಗೆ ವಿವಿಧ ಕೊಡುಗೆ ನೀಡಿದ ಗಣ್ಯರಿಗೆ ಅಭಿನಂದನೆ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.

ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು. ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಅಧ್ಯಕ್ಷ, ವಕೀಲರು ಸುರೇಶ್ ಶೆಟ್ಟಿ ಶಾಲೆಗೆ ಸೌಂಡ್ಸ್ ಸಿಸ್ಟಮ್ ಕೊಡುಗೆಯಾಗಿ ನೀಡಿದರು. ರಾಘವೇಂದ್ರ ಭಟ್ ಶಾಲಾ ಮಕ್ಕಳಿಗೆ ಛತ್ರಿ ವಿತರಿಸಿದರು.

ಮಂಜುಶ್ರೀ ಎಲೆಕ್ಟ್ರಾನಿಕ್ಸ್ ಮಾಲೀಕ ಗಣೇಶ್ ಪೂಜಾರಿ ಶಾಲಾ ನಲಿ ಕಲಿ ಮಕ್ಕಳಿಗೆ ಟೇಬಲ್ ಮತ್ತು ಕುರ್ಚಿ ನೀಡಿದರು. ಉದ್ಯಮಿ, ಕೃಷಿಕ ಕಿರಣ್ ಕುಮಾರ್ ಮಂಜಿಲ ಶಾಲಾ ಮಕ್ಕಳಿಗೆ ಸ್ಕ್ವಾಡ್ ಡ್ರೆಸ್ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಕೀಲರು ಸುರೇಶ್ ಶೆಟ್ಟಿ ಮತ್ತು ರಾಘವೇಂದ್ರ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಅಬುರ, ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಣೇಶ್ ಶೆಟ್ಟಿಗಾರ್, ಪ್ರಭಾಕರ್ ಮೈರಬೆಟ್ಟು, ಸೋಮನಾಥ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಸುಶೀಲ ಪ್ರಾಸ್ತಾವಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಲ್ಯಾಸ್ ಅಬ್ದುಲ್ ಹಕೀಂ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya
error: Content is protected !!