September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

ಆರಂಬೋಡಿ: 2025-526ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಗೆ ವಿವಿಧ ಕೊಡುಗೆ ನೀಡಿದ ಗಣ್ಯರಿಗೆ ಅಭಿನಂದನೆ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.

ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು. ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಅಧ್ಯಕ್ಷ, ವಕೀಲರು ಸುರೇಶ್ ಶೆಟ್ಟಿ ಶಾಲೆಗೆ ಸೌಂಡ್ಸ್ ಸಿಸ್ಟಮ್ ಕೊಡುಗೆಯಾಗಿ ನೀಡಿದರು. ರಾಘವೇಂದ್ರ ಭಟ್ ಶಾಲಾ ಮಕ್ಕಳಿಗೆ ಛತ್ರಿ ವಿತರಿಸಿದರು.

ಮಂಜುಶ್ರೀ ಎಲೆಕ್ಟ್ರಾನಿಕ್ಸ್ ಮಾಲೀಕ ಗಣೇಶ್ ಪೂಜಾರಿ ಶಾಲಾ ನಲಿ ಕಲಿ ಮಕ್ಕಳಿಗೆ ಟೇಬಲ್ ಮತ್ತು ಕುರ್ಚಿ ನೀಡಿದರು. ಉದ್ಯಮಿ, ಕೃಷಿಕ ಕಿರಣ್ ಕುಮಾರ್ ಮಂಜಿಲ ಶಾಲಾ ಮಕ್ಕಳಿಗೆ ಸ್ಕ್ವಾಡ್ ಡ್ರೆಸ್ ನೀಡಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಕೀಲರು ಸುರೇಶ್ ಶೆಟ್ಟಿ ಮತ್ತು ರಾಘವೇಂದ್ರ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಅಬುರ, ಮನೋಜ್ ಶೆಟ್ಟಿ ಐತೇರಿ, ರಮೇಶ್ ಅಬುರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಹಾಸ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಣೇಶ್ ಶೆಟ್ಟಿಗಾರ್, ಪ್ರಭಾಕರ್ ಮೈರಬೆಟ್ಟು, ಸೋಮನಾಥ ಪೂಜಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯಶಿಕ್ಷಕಿ ಸುಶೀಲ ಪ್ರಾಸ್ತಾವಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಲ್ಯಾಸ್ ಅಬ್ದುಲ್ ಹಕೀಂ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!