25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya
error: Content is protected !!