September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ದಿವ್ಯಶ್ರೀ ಸ್ವಸಹಾಯ ಸಂಘದ ಸದಸ್ಯರು ದೀಪ ಪ್ರಜ್ವಲಿಸುವುದರ ಮೂಲಕ ಒಕ್ಕೂಟ ಸಭೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ನಾರಾವಿ ವಲಯ ಜನಜಾಗ್ರತಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಎನ್. ನಾವರ, ಆಂತರಿಕ ಲೆಕ್ಕಪರಿಶೋಧಕ ಶೇಖರ, ಒಕ್ಕೂಟದ ಕಾರ್ಯದರ್ಶಿ ಎನ್. ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ನಳಿನಾಕ್ಷಿ, ಕೋಶಾಧಿಕಾರಿ ಹರೀಶ್ ಮೂಲ್ಯ, ಜನಜಾಗ್ರತಿ ಗ್ರಾಮ ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಎನ್ ವಿಜಯ ಕುಮಾರ್ ಜೈನ್ ಮಾತನಾಡಿ ಜೂ.14ರಂದು ಅಳದಂಗಡಿಯಲ್ಲಿ ನಡೆಯುವ ಸರಕಾರಿ ಕೆಲಸದಿಂದ ನಿವೃತ್ತರಾಗಿರುವ ಶಿವಪ್ರಸಾದ್ ಅಜಿಲರ ಪೌರ ಸನ್ಮಾನದ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿದ್ದಪ್ಪ ಮೂಲ್ಯ ಸ್ವಾಗತಿಸಿ, ವಂದಿಸಿದರು.

Related posts

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya
error: Content is protected !!