25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.

ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ, ಸ್ನೇಹ, ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದರು.

ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಸಲೀಂ, ಗೌರವಾಧ್ಯಕ್ಷ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್, ಸಮಿತಿ ಸದಸ್ಯರು, ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.

ಸುನ್ನೀ ಬಾಲಸಂಘ SಃS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಸಿಹಿಯೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.

Related posts

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya
error: Content is protected !!