23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

ಬೆಳ್ತಂಗಡಿ: ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸೌಹಾರ್ದ ಸಂದೇಶ ಭಾಷಣದೊಂದಿಗೆ ಜೂ.7ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.

ಸಂದೇಶ ಭಾಷಣ ಮಾಡಿದ ಖತೀಬ್ ಉಸ್ತಾದ್ ಅಬೂ ರಬೀಹ್ ಶರೀಫ್ ಸಖಾಫಿ ಉಜಿರ್ಬೆಟ್ಟು ಸರ್ವ ಧರ್ಮೀಯರಲ್ಲಿ ಸ್ನೇಹ ಸಹಬಾಳ್ವೆಯ ಜೀವನದ ನಡೆಸುವುದು ಕಾಲದ ಬೇಡಿಕೆ.ಪವಿತ್ರ ಇಸ್ಲಾಂ ಧರ್ಮ ಯಾವತ್ತೂ ಸೌಹಾರ್ದತೆ, ಸ್ನೇಹ, ಐಕ್ಯತೆಗೆ ಪ್ರಾಧಾನ್ಯತೆ ನೀಡಿದೆ.ಇತರ ಯಾವುದೇ ಧರ್ಮೀಯರ ಮನಸ್ಸು ನೋಯಿಸುವ ಯಾವುದೇ ರೀತಿಯ ತಪ್ಪು ಸಂದೇಶದಿಂದ ಯುವಕರು ದೂರವಿರಬೇಕು ಎಂದರು.

ಬೆದ್ರಬೆಟ್ಟು ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಸಲೀಂ, ಗೌರವಾಧ್ಯಕ್ಷ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಮುಸ್ತಫಾ ಮಾಸ್ಟರ್, ಕೋಶಾಧಿಕಾರಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿ ಸಿರಾಜುದ್ದೀನ್, ಸಮಿತಿ ಸದಸ್ಯರು, ಊರಿನ ಉಲಮಾ ಉಮರಾ ನಾಯಕರು, ಹಿರಿಯರು, ಯುವಕರು, ಕಿರಿಯರು ಭಾಗಿಯಾದರು.

ಸುನ್ನೀ ಬಾಲಸಂಘ SಃS ವಿದ್ಯಾರ್ಥಿಗಳು ಈದ್ ಶುಭಾಷಯ ಕಾರ್ಡನ್ನು ಸಿಹಿಯೊಂದಿಗೆ ಎಲ್ಲರಿಗೂ ಹಂಚಿ ವಿಶೇಷ ರೀತಿಯ ಬಕ್ರೀದ್ ಹಬ್ಬ ಆಚರಣೆಯಲ್ಲಿ ಭಾಗಿಯಾದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!