23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

ಉಜಿರೆ: ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ೮ನೇ ತರಗತಿ ಹೊಸ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ದೀಪಪ್ರಜ್ವಲಿಸಿ, ಮಾತನಾಡಿ ವಿದ್ಯಾರ್ಥಿಗಳು ತಾಂತ್ರಿಕ ಜಗತ್ತಿಗೆ ಸಿಲುಕಿಕೊಂಡಿದ್ದಾರೆ, ಪೋಷಕರು ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು.

ವಿದ್ಯಾರ್ಥಿ ದಿಸೆಯಲ್ಲಿ ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳುವಂತೆ ಮಾಡುವುದು ಪ್ರಸ್ತುತ ಕಾಲಘಟ್ಟದಲ್ಲಿ ಅತಿ ಅಗತ್ಯ. ಈ ಶಿಕ್ಷಣವನ್ನು ರತ್ನಮಾನಸ ವಿದ್ಯಾರ್ಥಿ ನಿಲಯ ಹಲವಾರು ವರ್ಷಗಳಿಂದ ನೀಡುತ್ತ ಬಂದಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅನೇಕ ಕ್ಷೇತ್ರದಲ್ಲಿ ಜವಾಬ್ದಾರಿಯುತ ಹುದ್ದೆಯನ್ನು ಅಲಂಕರಿಸಿ, ಯಶಸ್ವಿಯಾಗಿರುವಂತಹ ನಿದರ್ಶನಗಳಿವೆ ಎಂದು ರತ್ನಮಾನಸದ ವಿದ್ಯಾರ್ಥಿಗಳು ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಸಂಸ್ಕೃತ ಉಪನ್ಯಾಸಕರಾದ ಡಾ/ ಪ್ರಸನ್ನ ಕುಮಾರ್ ಐತಾಳ್ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಮುಖ್ಯ ಅತಿಥಿ ಗುರುವಾಯನಕೆರೆ ಫ್ರೌಡಶಾಲೆಯ ರಾಜ್ಯ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಮಾತನಾಡಿ ವ್ಯಕ್ತಿ ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರಬೇಕು. ಹಲವಾರು ಮಂದಿಗೆ ಉದ್ಯೋಗವನ್ನು ಕೊಡುವಂತಹ ಶಕ್ತಿಗಳಾಗಬೇಕು, ಅಂಕವೇ ಪ್ರಾದಾನ್ಯತೆ ಅಲ್ಲ ಉತ್ತಮ ನಡವಳಿಕೆ ಅತಿ ಅಗತ್ಯ ಎಂದರು.

ಶಿಸ್ತು, ಸಮಯಪಾಲನೆ, ಸಂಸ್ಕಾರವನ್ನು ರತ್ನಮಾನಸ ಕಲಿಸುತ್ತದೆ. ಕಲಿಕೆಯಲ್ಲಿ ಶ್ರದ್ಧೆ, ವಿನಯ, ತಾಳ್ಮೆ ಬಹಳ ಪ್ರಾಮುಖ್ಯವಾದವು. ಮಕ್ಕಳ ಕಲಿಕೆ ಉತ್ತಮವಾಗಬೇಕಾದರೆ ಪೋಷಕರ ಪಾತ್ರ ಅಮೂಲ್ಯವಾದದ್ದು ಎಂದು ಎಸ್‌ಡಿಎಂ ಡಿಎಡ್ ಕಾಲೇಜಿನ ಉಪನ್ಯಾಸಕ ಮಂಜು ಆರ್. ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಆರೋಗ್ಯ ಕೇಂದ್ರದ ಹಿರಿಯ ಪರಿವೀಕ್ಷಕ ಸೋಮನಾಥ್ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಅಧ್ಯಕ್ಷತೆಯನ್ನು ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕ ಯತೀಶ್ ಕೆ. ಬಳಂಜ ವಹಿಸಿದ್ದರು.
೮ನೇ ತರಗತಿಯ ವಿದ್ಯಾರ್ಥಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ 10ನೇ ತರಗತಿಯ ವಿದ್ಯಾರ್ಥಿಗಳು ಆರತಿಯನ್ನು ಬೆಳಗಿ ಹಣೆಗೆ ತಿಲಕವನ್ನು ಇಟ್ಟು, ಬರಮಾಡಿಕೊಂಡರು.

ವೇದಿಕೆಯಲ್ಲಿ ನಿಲಯದ ಸಿಬ್ಬಂದಿಗಳಾದ ದೀಪಕ್ ಹಾಗೂ ಉದಯ ಕುಮಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ನಿಶಿತ್ ಹಾಗೂ ರಾಕೇಶ್ ಡಿ ಆರ್ ಪ್ರಾರ್ಥಿಸಿ, ನಿಲಯದ ಅಧ್ಯಾಪಕರಾದ ರವಿಚಂದ್ರ ಸ್ವಾಗತಿಸಿದರು. ಉದಯರಾಜ್ ವಂದಿಸಿದರು. ವಿದ್ಯಾರ್ಥಿ ನಿಶಿತ್ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!