24.2 C
ಪುತ್ತೂರು, ಬೆಳ್ತಂಗಡಿ
June 10, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ನಾಲ್ಕು ಕೊಲೆ ಪ್ರಕರಣಗಳಲ್ಲಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮಾತ್ರ ಎನ್.ಐ.ಎ(NIA) ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳನ್ನು ಯಾಕೆ ಎನ್.ಐ.ಎ ಗೆ ನೀಡಿಲ್ಲಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಇಲ್ಲಿ ಕೇಂದ್ರ ಸರ್ಕಾರ ಕೊಲೆ ಪ್ರಕರಣದಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದೆ. ರಾಜಕೀಯ ದೃಷ್ಟಿಯಿಂದ ಕೊಲೆ ಪ್ರಕರಣವನ್ನು ನೋಡುತಿದೆ ಹೊರತು, ನಿಜವಾದ ನ್ಯಾಯ ಒದಗಿಸಲು ಕೇಂದ್ರ ಸರಕಾರ ಮುಂದಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಅಪಾದಿಸಿದ್ದಾರೆ.

ಕೊಲೆಯಾದವರಿಗೆ ನಿಜವಾದ ನ್ಯಾಯ ದೊರಕಿಸಬೇಕಾದರೆ ಕೇಂದ್ರ ಸರಕಾರ ಈ ತಾರತಮ್ಯದ ನೀತಿಯನ್ನು ಬಿಟ್ಟು ಪ್ರಾಮಾಣಿಕವಾದ ತನಿಖೆಗೆ ಮುಂದಾಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೇವಲ ಒಂದು ಪ್ರಕರಣವನ್ನು ನೀಡುವ ಮೂಲಕ ಕೇಂದ್ರ ಸರಕಾರ ಎಲ್ಲೋ ಜನರಲ್ಲಿ ಸಂಶಯ ಹಾಗೂ ತಪ್ಪು ಅಭಿಪ್ರಾಯವನ್ನು ಮೂಡಿಸುವ ಮೂಲಕ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಅವರ ಅಭಿಪ್ರಾಯ ಪಟ್ಟಿದ್ದಾರೆ.

Related posts

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!