24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

ಉಜಿರೆ: ಇಲ್ಲಿನ ಶ್ರೀ. ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ನೆವಿಲ್ ನವೀನ್ ಮೋರಸ್ ಮತ್ತು ದೀಪಕ್ ಇತ್ತೀಚಿಗೆ ನಡೆದ ಎರಡು ವಿಭಿನ್ನ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಭಾಗವಹಿಸಿದರು.

ಮೇ ತಿಂಗಳ 15 ಮತ್ತು 16 ರಂದು ಮಂಗಳೂರಿನ ಯೆನೆಪೋಯ ( ಡೀಮ್ಡ್ ಟು ಬಿ ಯುನಿವರ್ಸಿಟಿ) ದಲ್ಲಿ ಭಾರತ ಸರಕಾರ ಮತ್ತು ಯೂತ್ ಅಫೇರ್ಸ್ ಮತ್ತು ಸ್ಪೋರ್ಟ್ಸ್ ವತಿಯಿಂದ “ ಭಾರತದ ಭವಿಷ್ಯವನ್ನು ಕಲ್ಪಿಸುವುದು: ಬದಲಾವಣೆ ತರುವವರಾಗಿ ಯುವಕರು ” ಎಂಬ ಹೆಸರಿನಡಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣ ಐಕಾನ್ ಯೂತ್ 2025 ರಲ್ಲಿ ಇಲ್ಲಿನ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಹಾಗೂ ಎನ್ ಎಸ್ ಎಸ್ ಸ್ವಯಂ ಸೇವಕ ನೇವಿಲ್ ನವೀನ್ ಮೊರಾಸ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.

ಇದೇ ತಿಂಗಳ 5 ಮತ್ತು 6 ರಂದು ರಾಜ್ಯ ಎನ್ ಎಸ್ ಎಸ್ ಸೆಲ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ ನಡೆದ “ ಗ್ಲೋಬಲ್ ಯೂತ್ ಸುಮ್ಮಿಟ್ 2025 , ಯೂತ್ ಪವರ್ , ಇನ್ನೋವೇಟ್, ಇನ್ಸ್ಪೈರ್, ಇಂಪ್ಯಾಕ್ಟ್ ” ನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ದೀಪಕ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ. ಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್, ಪ್ರೊ.ದೀಪ ಆರ್. ಪಿ ಅಭಿನಂದಿಸಿದ್ದಾರೆ.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya
error: Content is protected !!