September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!