July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!