July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಮುಂಡೂರು ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಮುಂಡೂರು ಇವರ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಶಾಲಾ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮ ಉದ್ದೇಶಿಸಿ ಪ್ರಸ್ತಾವಿಕವಾಗಿ ಕೃಷಿ ಮೇಲ್ವಿಚಾರಕ ಕೃಷ್ಣ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹೆಗ್ಗಡೆ ಯವರ ಮಾರ್ಗದರ್ಶನಂತೆ ಪ್ರತಿ ವರ್ಷ ಶಾಲಾ-ಕಾಲೇಜು, ಸಮುದಾಯ ಭವನ, ದೇವಸ್ಥಾನ, ಕೆರೆಯಂಗಳದಲ್ಲಿ ಗಿಡ ನಾಟಿ ಮಾಡುವುದರ ಮೂಲಕ ಪರಿಸರ ಸಂರಕ್ಷಣೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ. ಈ ಭೂಮಿ ಮೇಲೆ ಮನುಷ್ಯ ಬದುಕಬೇಕಾದರೆ ಪರಿಸರ ನಮಗೆ ತೀರ ಅವಶ್ಯವಾಗಿಬೇಕು. ಗಿಡವನ್ನು ನೆಟ್ಟು ಪಾಲನೆ, ಪೋಷಣೆ ಮಾಡಿ ರಕ್ಷಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಚಾಮರಾಜ ಸೀಮಿತ್ ರವರು ಮಾತನಾಡಿ ಈ ಭೂಮಿಲಿ ಇರುವಂತ ಪ್ರತಿಯೊಂದು ಪಶು, ಪಕ್ಷಿ, ಪ್ರಾಣಿಗಳು, ಮನುಷ್ಯರು ಬದುಕಬೇಕೆಂದರೆ ನಮಗೆ ಈ ಭೂಮಿಯ ಮೇಲೆ ಪರಿಸರ ಅತ್ಯಂತ ಮುಖ್ಯವಾಗಿ ಬೇಕಾಗಿರುವಂತದ್ದು, ಮನುಷ್ಯನ ಉಸಿರಾಟಕ್ಕೆ ಆಮ್ಲಜನಕ ಎಷ್ಟು ಮುಖ್ಯವೋ, ಶುದ್ಧವಾದ ಆಮ್ಲಜನಕ ಕೊಡುವಂತ ಗಿಡ ಮರಗಳು ಅಷ್ಟೇ ಮುಖ್ಯವಾದದ್ದು ಹಾಗಾಗಿ ಎಲ್ಲರೂ ಗಿಡ ನೆಟ್ಟು, ಗಿಡಗಳ ರಕ್ಷಣೆ ಮಾಡಬೇಕೆಂದು ತಿಳಿಸಿದರು.

ಗಿಡ ನಾಟಿ ಕಾರ್ಯಕ್ರಮಕ್ಕೆ ಮೇಲ್ವಿಚಾರಕಿ ಯಶೋಧ ರವರು ಚಾಲನೆ ನೀಡಿದರು. ಶೌರ್ಯ ವಿಪತ್ತುಗುರುವಾಯನಕೆರೆ ತಂಡ ದವರಿಂದ ಗಿಡ ನಾಟಿ ಮಾಡಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಅವರು ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ನಾಗೇಶ್, ಜಗನಾಥ್ , ಸೇವಾಪ್ರತಿನಿಧಿ ಶ್ರೀಮತಿ ಭಾರತಿ ಹಾಗೂ ಶ್ರೀಮತಿ ಪ್ರತಿಭಾ, ಚಂದ್ರವತಿ, ಹಾಗೂ ಅಶೋಕ್ ಜೈನ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು, ಸಂಘದ ಸದಸ್ಯರು, ಶಾಲೆಯ ಮಕ್ಕಳು, ಊರಿನ ಗ್ರಾಮಸ್ಥರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya
error: Content is protected !!