25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

ಕಳಿಯ : ಇಲ್ಲಿಯ ಸುಣ್ಣಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ಜೂ.09 ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಮಲಗಿದ್ದ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ, ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿ ಗೊಳಿಸಿ ನಗದು ಕಳ್ಳತನ ನಡೆಸಿದ್ದಾರೆ.

ಗೋದ್ರೇಜ್ ನ ಬಾಗಿಲು ತೆರೆಯುವ ಶಬ್ದ ಕೇಳಿ ಅಲ್ಲೇ ಮಲಗಿದ್ದ ಆಸಿಫ್ ಗೆ ಎಚ್ಚರವಾದಾಗ ಕಳ್ಳನು ಹಿಂದಿನ ಬಾಗಿಲಿನಿಂದ ಓಡಿ ಪರಾರಿಯಾಗಿದ್ದಾನೆ. ತಕ್ಷಣ ಮನೆ ಮಾಲಿಕರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಮತ್ತು ಅರ್ಶದ್ ರವರಿಗೆ ಮಾಹಿತಿ ನೀಡಿ ಅವರು ರಾತ್ರಿಯೇ ಬಂದು ಪೋಲಿಸರಿಗೆ ಮಾಹಿತಿ ನೀಡಿದರು. ಬೆಳ್ತಂಗಡಿ ಪೋಲಿಸರು ರಾತ್ರಿಯೇ ಬಂದು ಪರಿಶೀಲನೆ ನಡೆಸಿದರು. ಬೆಳಿಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದರು.ಇನ್ಸ್ ಪೆಕ್ಟರ್ ಸುಬ್ಬಾಪುರಮಠ ಬೇಟಿ ನೀಡಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ತನಿಖೆ ಮುಂದುವರೆಯುತ್ತಿದೆ.

Related posts

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!