September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

ಕಳಿಯ : ಇಲ್ಲಿಯ ಸುಣ್ಣಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ಜೂ.09 ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಮಲಗಿದ್ದ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ, ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿ ಗೊಳಿಸಿ ನಗದು ಕಳ್ಳತನ ನಡೆಸಿದ್ದಾರೆ.

ಗೋದ್ರೇಜ್ ನ ಬಾಗಿಲು ತೆರೆಯುವ ಶಬ್ದ ಕೇಳಿ ಅಲ್ಲೇ ಮಲಗಿದ್ದ ಆಸಿಫ್ ಗೆ ಎಚ್ಚರವಾದಾಗ ಕಳ್ಳನು ಹಿಂದಿನ ಬಾಗಿಲಿನಿಂದ ಓಡಿ ಪರಾರಿಯಾಗಿದ್ದಾನೆ. ತಕ್ಷಣ ಮನೆ ಮಾಲಿಕರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಮತ್ತು ಅರ್ಶದ್ ರವರಿಗೆ ಮಾಹಿತಿ ನೀಡಿ ಅವರು ರಾತ್ರಿಯೇ ಬಂದು ಪೋಲಿಸರಿಗೆ ಮಾಹಿತಿ ನೀಡಿದರು. ಬೆಳ್ತಂಗಡಿ ಪೋಲಿಸರು ರಾತ್ರಿಯೇ ಬಂದು ಪರಿಶೀಲನೆ ನಡೆಸಿದರು. ಬೆಳಿಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದರು.ಇನ್ಸ್ ಪೆಕ್ಟರ್ ಸುಬ್ಬಾಪುರಮಠ ಬೇಟಿ ನೀಡಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ತನಿಖೆ ಮುಂದುವರೆಯುತ್ತಿದೆ.

Related posts

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!