25 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

    Suddi Udaya

    ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

    Suddi Udaya

    ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

    Suddi Udaya

    ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

    Suddi Udaya

    ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

    Suddi Udaya

    ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

    Suddi Udaya
    error: Content is protected !!