June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

ಬೆಳ್ತಂಗಡಿ: ಚಿತ್ರದುರ್ಗದಿಂದ ಬಂದು ಬೆಳ್ತಂಗಡಿ ಮೂಲಕ ಬಲ್ಲಾಳರಾಯನ ದುರ್ಗಕ್ಕೆ ಚಾರಣಕ್ಕೆ ತೆರಳಿದ್ದ 10 ತಂಡ ಬಲ್ಲಾಳರಾಯನ ದುರ್ಗಾದ ಕಾಡಿನಲ್ಲಿ ಸಿಲುಕಿದ ಘಟನೆ ಜೂ. 9 ರಂದು ತಡರಾತ್ರಿಯಲ್ಲಿ ನಡೆದಿದೆ.

ಜೂ. 9 ರಂದು ಬೆಳಗ್ಗೆ, ಬೆಳ್ತಂಗಡಿಗೆ ಬಂದು ಅರಣ್ಯದ ಮೂಲಕ ಟ್ರೆಕ್ಕಿಂಗ್ ಆರಂಭಿಸಿದ ಐವರು ಯುವಕರು ಹಾಗೂ ಐದು ಮಂದಿ ಯುವತಿಯರ ತಂಡ ಚಾರಣಿಗರು ರಾತ್ರಿಯ ವೇಳೆ ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದು, ಬಳಿಕ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ನಂತರ ಕಾರ್ಯ ಪ್ರವೃತ್ತರಾದ ಚಿಕ್ಕಮಗಳೂರು ಪೊಲೀಸರು, ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಜೊತೆ ಅರಣ್ಯದಲ್ಲಿ ಹುಡುಕಾಟ ನಡೆಸಿದ್ದು ತಡ ರಾತ್ರಿಯ ವೇಳೆ ಇವರನ್ನು ದಟ್ಟ ಅರಣ್ಯದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಬೆಳಗಿನ ಜಾವ ಇವರನ್ನು ಅರಣ್ಯದಿಂದ ಸುರಕ್ಷಿತವಾಗಿ ಹೊರತರಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya
error: Content is protected !!