July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 558 ನೇ ಸೇವಾ ಯೋಜನೆ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಪಿನಡ್ಕ ಬಳಂಜ ಮಕ್ಕಳಿಗೆ ಉಚಿತ ಪುಸ್ತಕ ಮತ್ತು ಬ್ಯಾಗ್ ವಿತರಣೆ ಜೂ. 8ರಂದು ಕಾಪಿನಡ್ಕ ಸ.ಕಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುಸ್ತಕ ಮತ್ತು ಬ್ಯಾಗ್ ವಿತರಣೆ ಮಾಡಿ ಮಾತನಾಡಿದ ಪತ್ರಿಕೆಯ ವರದಿಗಾರ , ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜ ಮಾತನಾಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಊರಿನ ಸಂಘ ಸಂಸ್ಥೆಗಳು ಮತ್ತು ಹಳೆ ವಿದ್ಯಾರ್ಥಿಗಳದ್ದು. ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಸರಕಾರದ ಅನೇಕ ಸೌಲಭ್ಯಗಳು ಸಿಗುತ್ತಿದೆ. ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಾತ್ರ ಅನುದಾನ ಕಡಿತವಾಗುತ್ತದೆ. ಆಗ ಸಂಘ ಸಂಸ್ಥೆಗಳು ಕೈಜೊಡಿಸಿದಾಗ ಮಕ್ಕಳಿಗೆ ನೆರವಾಗುತ್ತದೆ. ರಾಜಕೇಸರಿ ಸಂಘಟನೆ ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ನೊಂದವರಿಗೆ ನೆರವು, ಸರಕಾರಿ ಶಾಲೆಯ ಅಭಿವೃದ್ಧಿ, ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಇನ್ನಿತರ ಸಮಾಜಮುಖಿ ಕಾರ್ಯ ಮಾಡುತ್ತಿದ್ದು ಇದು ನೈಜ ಸಮಾಜಸೇವೆಯಾಗಿದೆ. ಇವರೊಂದಿಗೆ ಇನ್ನಷ್ಟು ದಾನಿಗಳು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಸಂಚಾಲಕರಾದ ಜಗದೀಶ್ ಲಾಯಿಲ, ಸಹ ಸಂಚಾಲಕರಾದ ಶರತ್ ಕರಾಯ, ಸಾಮಾಜಿಕ ಜಾಲತಾಣದ ಸಂಪತ್, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾದ ವಿನೋದ್ ಲಾಯಿಲ,
ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗ ಕಾಪಿನಡ್ಕ ಇದರ ಕಾರ್ಯದರ್ಶಿಯಾದ ಯತೀಶ್, ಶಿಕ್ಷಕಿ ಅನಿತಾ, ಮತ್ತು ಮಕ್ಕಳ ಪೋಷಕರು ಉಪಸ್ಥಿತಿತರಿದ್ದರು.


ಶಿಕ್ಷಕಿಯಾದ ಶಾಂತಿವಾಸ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯಾದ ಅನುಷಾ ವಂದಿಸಿದರು.

Related posts

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!