25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮ ವಹಿಸಲು ಸೂಚಿಸಿದರು.
ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ, ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪರೀತ ಮಳೆಯ ಅವಧಿಯಲ್ಲಿ ಮನೆಯನ್ನು ತೆರವುಗೊಳಿಸಿ ಕಾಳಜಿ ಕೇಂದ್ರ ಅಥವಾ ಸಂಬಂಧಿಕರ ಮನೆಗೆ ತೆರಳುವಂತೆ ನೋಟೀಸನ್ನು ನೀಡುವುದು, ಗುಡ್ಡಜರಿತ ಉಂಟಾಗಬಹುದಾದ ಸ್ಥಳಗಳಲ್ಲಿ, ದಾಟಲು ಅಪಾಯಕಾರಿಯಾಗಿರುವ ಕಾಲುಸಂಕ, ಸೇತುವೆ ಇತ್ಯಾದಿ ಸ್ಥಳಗಳನ್ನು ಗುರುತಿಸಿ ಎಚ್ಚರಿಕೆ ಫಲಕಗಳ ಅಳವಡಿಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕರೆದು ಚರ್ಚಿಸುವುದು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕೂಡಲೇ ವರದಿ ನೀಡಿ ತರಗತಿಗಳನ್ನು ನಡೆಸಲು ಬದಲಿ ವ್ಯವಸ್ಥೆ ಮಾಡುವುದು ಇತ್ಯಾದಿಗಳ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!