25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮ ವಹಿಸಲು ಸೂಚಿಸಿದರು.
ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ, ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪರೀತ ಮಳೆಯ ಅವಧಿಯಲ್ಲಿ ಮನೆಯನ್ನು ತೆರವುಗೊಳಿಸಿ ಕಾಳಜಿ ಕೇಂದ್ರ ಅಥವಾ ಸಂಬಂಧಿಕರ ಮನೆಗೆ ತೆರಳುವಂತೆ ನೋಟೀಸನ್ನು ನೀಡುವುದು, ಗುಡ್ಡಜರಿತ ಉಂಟಾಗಬಹುದಾದ ಸ್ಥಳಗಳಲ್ಲಿ, ದಾಟಲು ಅಪಾಯಕಾರಿಯಾಗಿರುವ ಕಾಲುಸಂಕ, ಸೇತುವೆ ಇತ್ಯಾದಿ ಸ್ಥಳಗಳನ್ನು ಗುರುತಿಸಿ ಎಚ್ಚರಿಕೆ ಫಲಕಗಳ ಅಳವಡಿಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕರೆದು ಚರ್ಚಿಸುವುದು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕೂಡಲೇ ವರದಿ ನೀಡಿ ತರಗತಿಗಳನ್ನು ನಡೆಸಲು ಬದಲಿ ವ್ಯವಸ್ಥೆ ಮಾಡುವುದು ಇತ್ಯಾದಿಗಳ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
error: Content is protected !!