July 23, 2026
ತಾಲೂಕು ಸುದ್ದಿ

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬೆಳ್ತಂಗಡಿ: ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ನೀಡಿರುವ ಸೂಚನೆಯಂತೆ ಬೆಳ್ತಂಗಡಿ ತಾ. ಪಂ. ಸಭಾಂಗಣದಲ್ಲಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ರವರು ಲೋಕೋಪಯೋಗಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾಧಿಕಾರಿಗಳ ಆದೇಶದಂತೆ ಕ್ರಮ ವಹಿಸಲು ಸೂಚಿಸಿದರು.
ಗುಡ್ಡ ಜರಿತ ಉಂಟಾಗಬಹುದಾದ ಸ್ಥಳದಲ್ಲಿ ಅಥವಾ ಹೊಳೆ, ತೊರೆ ಬದಿಯಲ್ಲಿರುವ ಮನೆಗಳವರಿಗೆ ವಿಪರೀತ ಮಳೆಯ ಅವಧಿಯಲ್ಲಿ ಮನೆಯನ್ನು ತೆರವುಗೊಳಿಸಿ ಕಾಳಜಿ ಕೇಂದ್ರ ಅಥವಾ ಸಂಬಂಧಿಕರ ಮನೆಗೆ ತೆರಳುವಂತೆ ನೋಟೀಸನ್ನು ನೀಡುವುದು, ಗುಡ್ಡಜರಿತ ಉಂಟಾಗಬಹುದಾದ ಸ್ಥಳಗಳಲ್ಲಿ, ದಾಟಲು ಅಪಾಯಕಾರಿಯಾಗಿರುವ ಕಾಲುಸಂಕ, ಸೇತುವೆ ಇತ್ಯಾದಿ ಸ್ಥಳಗಳನ್ನು ಗುರುತಿಸಿ ಎಚ್ಚರಿಕೆ ಫಲಕಗಳ ಅಳವಡಿಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕರೆದು ಚರ್ಚಿಸುವುದು, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕೂಡಲೇ ವರದಿ ನೀಡಿ ತರಗತಿಗಳನ್ನು ನಡೆಸಲು ಬದಲಿ ವ್ಯವಸ್ಥೆ ಮಾಡುವುದು ಇತ್ಯಾದಿಗಳ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!