24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya
error: Content is protected !!