September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

ಶಿಶಿಲ: ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಗೆ ಎರಡು ವರ್ಷಗಳಿಂದ ಮೀನ ಮೇಷ ನಡೆಯುತ್ತಿದೆ.

ಜೀರ್ಣೋದ್ಧಾರ ಮತ್ತು ಎರಡು ಬ್ರಹ್ಮಕಲಶವನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕೀರ್ತಿ ಗ್ರಾಮಸ್ಥರಿದ್ದು. ಇದೀಗಿನ ರಾಜಕೀಯ ವ್ಯವಸ್ಥೆಯಿಂದ ಇನ್ನೂ ವ್ಯವಸ್ಥಾಪನಾ ಸಮಿತಿಯು ರಚನೆಯಾಗದೆ ಬಾಕಿಯಿರುವುದಾಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಿತಿ ಇಲ್ಲದೆ ದೇವಾಲಯದ ಎಲ್ಲಾ ಅಭಿವೃದ್ಧಿ ಕಾರ್ಯ ನಿಂತಿದೆ. ಸಾವಿರಾರು ಊರ‌ ಪರವೂರಿಂದ ಭಕ್ತಾದಿಗಳು ಬರುತ್ತಿದ್ದಾರೆ.ಅನ್ನ ದಾಸೊಹ ನಡೆಯುತ್ತಿದೆ. ಮತ್ಸ್ಯ ಸಂಕುಲಗಳಿದ್ದಾವೆ. ಕೃಷಿ ನಿರ್ವಹಣೆ ಆಗಬೇಕಾಗಿದೆ. ಹೀಗಿದ್ದರೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಆಯ್ಕೆ ಆಗಿದ್ದಾರೊ ಇಲ್ಲವೊ ಇನ್ನೂ ಮಾಹಿತಿ ಇಲ್ಲ. ಮುಜರಾಯಿ ಇಲಾಖೆಯನ್ನು ಸಂಪರ್ಕಿಸಿದರೆ ಜವಾಬ್ದಾರಿ ಉತ್ತರವಿಲ್ಲ. ಗ್ರಾಮದ ಊರ ಪರವೂರ ದಾನಿಗಳಿಂದಲೆ ಅಭಿವೃದ್ಧಿ ಆಗಿರುವ ಈ ಪುಣ್ಯಕ್ಷೇತ್ರಕ್ಕೆ ಈ ರೀತಿಯ ಸಮಿತಿ ರಚನೆಗೆ ಯಾಕೆ ತಡವಾಗುತ್ತಿದೆ ಎಂಬ ಮಾಹಿತಿ ಇಲ್ಲ.


ಆದುದರಿಂದ ಕೂಡಲೆ ವ್ಯವಸ್ಥಾಪನಾ ಸಮಿತಿ ರಚಿಸುವಂತೆ ಭಕ್ತರು ಆಗ್ರಹಿಸಿದ್ದಾರೆ ಹಾಗೂ ಮುಜರಾಯಿ ಇಲಾಖೆಗೂ ಮಾಹಿತಿ ನೀಡಿರುತ್ತಾರೆ.

ತಪ್ಪಿದ್ದಲ್ಲಿ ಗ್ರಾಮದ ಭಕ್ತಾಧಿಗಳೆ ಊರ ಭಕ್ತರ ಸಭೆ ಕರೆದು ಪ್ರತಿಭಟನೆಗೆ ಮುಂದಾಗುವುದಾಗಿ ಮಾಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯ ಮತ್ತು ಕರುಣಾಕರ ಶಿಶಿಲ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!