23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

ಶಿಶಿಲ: ಇತಿಹಾಸ ಪ್ರಸಿದ್ಧ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಗೆ ಎರಡು ವರ್ಷಗಳಿಂದ ಮೀನ ಮೇಷ ನಡೆಯುತ್ತಿದೆ.

ಜೀರ್ಣೋದ್ಧಾರ ಮತ್ತು ಎರಡು ಬ್ರಹ್ಮಕಲಶವನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕೀರ್ತಿ ಗ್ರಾಮಸ್ಥರಿದ್ದು. ಇದೀಗಿನ ರಾಜಕೀಯ ವ್ಯವಸ್ಥೆಯಿಂದ ಇನ್ನೂ ವ್ಯವಸ್ಥಾಪನಾ ಸಮಿತಿಯು ರಚನೆಯಾಗದೆ ಬಾಕಿಯಿರುವುದಾಗಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಿತಿ ಇಲ್ಲದೆ ದೇವಾಲಯದ ಎಲ್ಲಾ ಅಭಿವೃದ್ಧಿ ಕಾರ್ಯ ನಿಂತಿದೆ. ಸಾವಿರಾರು ಊರ‌ ಪರವೂರಿಂದ ಭಕ್ತಾದಿಗಳು ಬರುತ್ತಿದ್ದಾರೆ.ಅನ್ನ ದಾಸೊಹ ನಡೆಯುತ್ತಿದೆ. ಮತ್ಸ್ಯ ಸಂಕುಲಗಳಿದ್ದಾವೆ. ಕೃಷಿ ನಿರ್ವಹಣೆ ಆಗಬೇಕಾಗಿದೆ. ಹೀಗಿದ್ದರೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಆಯ್ಕೆ ಆಗಿದ್ದಾರೊ ಇಲ್ಲವೊ ಇನ್ನೂ ಮಾಹಿತಿ ಇಲ್ಲ. ಮುಜರಾಯಿ ಇಲಾಖೆಯನ್ನು ಸಂಪರ್ಕಿಸಿದರೆ ಜವಾಬ್ದಾರಿ ಉತ್ತರವಿಲ್ಲ. ಗ್ರಾಮದ ಊರ ಪರವೂರ ದಾನಿಗಳಿಂದಲೆ ಅಭಿವೃದ್ಧಿ ಆಗಿರುವ ಈ ಪುಣ್ಯಕ್ಷೇತ್ರಕ್ಕೆ ಈ ರೀತಿಯ ಸಮಿತಿ ರಚನೆಗೆ ಯಾಕೆ ತಡವಾಗುತ್ತಿದೆ ಎಂಬ ಮಾಹಿತಿ ಇಲ್ಲ.


ಆದುದರಿಂದ ಕೂಡಲೆ ವ್ಯವಸ್ಥಾಪನಾ ಸಮಿತಿ ರಚಿಸುವಂತೆ ಭಕ್ತರು ಆಗ್ರಹಿಸಿದ್ದಾರೆ ಹಾಗೂ ಮುಜರಾಯಿ ಇಲಾಖೆಗೂ ಮಾಹಿತಿ ನೀಡಿರುತ್ತಾರೆ.

ತಪ್ಪಿದ್ದಲ್ಲಿ ಗ್ರಾಮದ ಭಕ್ತಾಧಿಗಳೆ ಊರ ಭಕ್ತರ ಸಭೆ ಕರೆದು ಪ್ರತಿಭಟನೆಗೆ ಮುಂದಾಗುವುದಾಗಿ ಮಾಜಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯ ಮತ್ತು ಕರುಣಾಕರ ಶಿಶಿಲ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya
error: Content is protected !!