23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

ಉಜಿರೆ: ಇಲ್ಲಿನ ಶ್ರೀ. ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ನೆವಿಲ್ ನವೀನ್ ಮೋರಸ್ ಮತ್ತು ದೀಪಕ್ ಇತ್ತೀಚಿಗೆ ನಡೆದ ಎರಡು ವಿಭಿನ್ನ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಭಾಗವಹಿಸಿದರು.

ಮೇ ತಿಂಗಳ 15 ಮತ್ತು 16 ರಂದು ಮಂಗಳೂರಿನ ಯೆನೆಪೋಯ ( ಡೀಮ್ಡ್ ಟು ಬಿ ಯುನಿವರ್ಸಿಟಿ) ದಲ್ಲಿ ಭಾರತ ಸರಕಾರ ಮತ್ತು ಯೂತ್ ಅಫೇರ್ಸ್ ಮತ್ತು ಸ್ಪೋರ್ಟ್ಸ್ ವತಿಯಿಂದ “ ಭಾರತದ ಭವಿಷ್ಯವನ್ನು ಕಲ್ಪಿಸುವುದು: ಬದಲಾವಣೆ ತರುವವರಾಗಿ ಯುವಕರು ” ಎಂಬ ಹೆಸರಿನಡಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣ ಐಕಾನ್ ಯೂತ್ 2025 ರಲ್ಲಿ ಇಲ್ಲಿನ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಹಾಗೂ ಎನ್ ಎಸ್ ಎಸ್ ಸ್ವಯಂ ಸೇವಕ ನೇವಿಲ್ ನವೀನ್ ಮೊರಾಸ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.

ಇದೇ ತಿಂಗಳ 5 ಮತ್ತು 6 ರಂದು ರಾಜ್ಯ ಎನ್ ಎಸ್ ಎಸ್ ಸೆಲ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ ನಡೆದ “ ಗ್ಲೋಬಲ್ ಯೂತ್ ಸುಮ್ಮಿಟ್ 2025 , ಯೂತ್ ಪವರ್ , ಇನ್ನೋವೇಟ್, ಇನ್ಸ್ಪೈರ್, ಇಂಪ್ಯಾಕ್ಟ್ ” ನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ದೀಪಕ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ. ಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್, ಪ್ರೊ.ದೀಪ ಆರ್. ಪಿ ಅಭಿನಂದಿಸಿದ್ದಾರೆ.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya
error: Content is protected !!