23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

ಉಜಿರೆ: ಇಲ್ಲಿನ ಶ್ರೀ. ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ನೆವಿಲ್ ನವೀನ್ ಮೋರಸ್ ಮತ್ತು ದೀಪಕ್ ಇತ್ತೀಚಿಗೆ ನಡೆದ ಎರಡು ವಿಭಿನ್ನ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಭಾಗವಹಿಸಿದರು.

ಮೇ ತಿಂಗಳ 15 ಮತ್ತು 16 ರಂದು ಮಂಗಳೂರಿನ ಯೆನೆಪೋಯ ( ಡೀಮ್ಡ್ ಟು ಬಿ ಯುನಿವರ್ಸಿಟಿ) ದಲ್ಲಿ ಭಾರತ ಸರಕಾರ ಮತ್ತು ಯೂತ್ ಅಫೇರ್ಸ್ ಮತ್ತು ಸ್ಪೋರ್ಟ್ಸ್ ವತಿಯಿಂದ “ ಭಾರತದ ಭವಿಷ್ಯವನ್ನು ಕಲ್ಪಿಸುವುದು: ಬದಲಾವಣೆ ತರುವವರಾಗಿ ಯುವಕರು ” ಎಂಬ ಹೆಸರಿನಡಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣ ಐಕಾನ್ ಯೂತ್ 2025 ರಲ್ಲಿ ಇಲ್ಲಿನ ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಹಾಗೂ ಎನ್ ಎಸ್ ಎಸ್ ಸ್ವಯಂ ಸೇವಕ ನೇವಿಲ್ ನವೀನ್ ಮೊರಾಸ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.

ಇದೇ ತಿಂಗಳ 5 ಮತ್ತು 6 ರಂದು ರಾಜ್ಯ ಎನ್ ಎಸ್ ಎಸ್ ಸೆಲ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ ನಡೆದ “ ಗ್ಲೋಬಲ್ ಯೂತ್ ಸುಮ್ಮಿಟ್ 2025 , ಯೂತ್ ಪವರ್ , ಇನ್ನೋವೇಟ್, ಇನ್ಸ್ಪೈರ್, ಇಂಪ್ಯಾಕ್ಟ್ ” ನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ದೀಪಕ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧೀಕರಿಸಿ ಭಾಗವಹಿಸಿದರು.ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ. ಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್, ಪ್ರೊ.ದೀಪ ಆರ್. ಪಿ ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!