ಬೆಳ್ತಂಗಡಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸದಿಲ್ಲಿಯ ಫ್ರೆಂಡ್ಶಿಪ್ ಫೋರಂ ನೀಡುವ ಪ್ರತಿಷ್ಠಿತ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಹಕಾರ, ಬ್ಯಾಂಕಿಂಗ್ ಮತ್ತು ಸಮಾಜಸೇವೆಯಲ್ಲಿ ಅವರ ಅನುಪಮ ಕೊಡುಗೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.