37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya
error: Content is protected !!