24.1 C
ಪುತ್ತೂರು, ಬೆಳ್ತಂಗಡಿ
June 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya
error: Content is protected !!