25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಗರ್ಡಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಜೂ. 8 ರಂದು ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷ ಸುಕೇಶ್ ಮಾಲಾಡಿ ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌

ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರು ವಂದಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!