22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಮುಂಡೂರು ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಮುಂಡೂರು ಇವರ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಶಾಲಾ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮ ಉದ್ದೇಶಿಸಿ ಪ್ರಸ್ತಾವಿಕವಾಗಿ ಕೃಷಿ ಮೇಲ್ವಿಚಾರಕ ಕೃಷ್ಣ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹೆಗ್ಗಡೆ ಯವರ ಮಾರ್ಗದರ್ಶನಂತೆ ಪ್ರತಿ ವರ್ಷ ಶಾಲಾ-ಕಾಲೇಜು, ಸಮುದಾಯ ಭವನ, ದೇವಸ್ಥಾನ, ಕೆರೆಯಂಗಳದಲ್ಲಿ ಗಿಡ ನಾಟಿ ಮಾಡುವುದರ ಮೂಲಕ ಪರಿಸರ ಸಂರಕ್ಷಣೆ ಮತ್ತು ಮಾಹಿತಿ ಕಾರ್ಯಕ್ರಮವನ್ನು ಆಚರಣೆ ಮಾಡುತ್ತಿದ್ದೇವೆ. ಈ ಭೂಮಿ ಮೇಲೆ ಮನುಷ್ಯ ಬದುಕಬೇಕಾದರೆ ಪರಿಸರ ನಮಗೆ ತೀರ ಅವಶ್ಯವಾಗಿಬೇಕು. ಗಿಡವನ್ನು ನೆಟ್ಟು ಪಾಲನೆ, ಪೋಷಣೆ ಮಾಡಿ ರಕ್ಷಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಚಾಮರಾಜ ಸೀಮಿತ್ ರವರು ಮಾತನಾಡಿ ಈ ಭೂಮಿಲಿ ಇರುವಂತ ಪ್ರತಿಯೊಂದು ಪಶು, ಪಕ್ಷಿ, ಪ್ರಾಣಿಗಳು, ಮನುಷ್ಯರು ಬದುಕಬೇಕೆಂದರೆ ನಮಗೆ ಈ ಭೂಮಿಯ ಮೇಲೆ ಪರಿಸರ ಅತ್ಯಂತ ಮುಖ್ಯವಾಗಿ ಬೇಕಾಗಿರುವಂತದ್ದು, ಮನುಷ್ಯನ ಉಸಿರಾಟಕ್ಕೆ ಆಮ್ಲಜನಕ ಎಷ್ಟು ಮುಖ್ಯವೋ, ಶುದ್ಧವಾದ ಆಮ್ಲಜನಕ ಕೊಡುವಂತ ಗಿಡ ಮರಗಳು ಅಷ್ಟೇ ಮುಖ್ಯವಾದದ್ದು ಹಾಗಾಗಿ ಎಲ್ಲರೂ ಗಿಡ ನೆಟ್ಟು, ಗಿಡಗಳ ರಕ್ಷಣೆ ಮಾಡಬೇಕೆಂದು ತಿಳಿಸಿದರು.

ಗಿಡ ನಾಟಿ ಕಾರ್ಯಕ್ರಮಕ್ಕೆ ಮೇಲ್ವಿಚಾರಕಿ ಯಶೋಧ ರವರು ಚಾಲನೆ ನೀಡಿದರು. ಶೌರ್ಯ ವಿಪತ್ತುಗುರುವಾಯನಕೆರೆ ತಂಡ ದವರಿಂದ ಗಿಡ ನಾಟಿ ಮಾಡಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯ ಕಲ್ಲೇಶ್ ಅವರು ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ನಾಗೇಶ್, ಜಗನಾಥ್ , ಸೇವಾಪ್ರತಿನಿಧಿ ಶ್ರೀಮತಿ ಭಾರತಿ ಹಾಗೂ ಶ್ರೀಮತಿ ಪ್ರತಿಭಾ, ಚಂದ್ರವತಿ, ಹಾಗೂ ಅಶೋಕ್ ಜೈನ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು, ಸಂಘದ ಸದಸ್ಯರು, ಶಾಲೆಯ ಮಕ್ಕಳು, ಊರಿನ ಗ್ರಾಮಸ್ಥರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!