23.7 C
ಪುತ್ತೂರು, ಬೆಳ್ತಂಗಡಿ
June 12, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

ಕಳಿಯ : ಇಲ್ಲಿಯ ಸುಣ್ಣಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ಜೂ.09 ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಮಲಗಿದ್ದ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ, ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿ ಗೊಳಿಸಿ ನಗದು ಕಳ್ಳತನ ನಡೆಸಿದ್ದಾರೆ.

ಗೋದ್ರೇಜ್ ನ ಬಾಗಿಲು ತೆರೆಯುವ ಶಬ್ದ ಕೇಳಿ ಅಲ್ಲೇ ಮಲಗಿದ್ದ ಆಸಿಫ್ ಗೆ ಎಚ್ಚರವಾದಾಗ ಕಳ್ಳನು ಹಿಂದಿನ ಬಾಗಿಲಿನಿಂದ ಓಡಿ ಪರಾರಿಯಾಗಿದ್ದಾನೆ. ತಕ್ಷಣ ಮನೆ ಮಾಲಿಕರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಮತ್ತು ಅರ್ಶದ್ ರವರಿಗೆ ಮಾಹಿತಿ ನೀಡಿ ಅವರು ರಾತ್ರಿಯೇ ಬಂದು ಪೋಲಿಸರಿಗೆ ಮಾಹಿತಿ ನೀಡಿದರು. ಬೆಳ್ತಂಗಡಿ ಪೋಲಿಸರು ರಾತ್ರಿಯೇ ಬಂದು ಪರಿಶೀಲನೆ ನಡೆಸಿದರು. ಬೆಳಿಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದರು.ಇನ್ಸ್ ಪೆಕ್ಟರ್ ಸುಬ್ಬಾಪುರಮಠ ಬೇಟಿ ನೀಡಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ತನಿಖೆ ಮುಂದುವರೆಯುತ್ತಿದೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya
error: Content is protected !!