24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

ಕಳಿಯ : ಇಲ್ಲಿಯ ಸುಣ್ಣಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ಜೂ.09 ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಮಲಗಿದ್ದ ಕೋಣೆಯಲ್ಲಿದ್ದ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ, ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿ ಗೊಳಿಸಿ ನಗದು ಕಳ್ಳತನ ನಡೆಸಿದ್ದಾರೆ.

ಗೋದ್ರೇಜ್ ನ ಬಾಗಿಲು ತೆರೆಯುವ ಶಬ್ದ ಕೇಳಿ ಅಲ್ಲೇ ಮಲಗಿದ್ದ ಆಸಿಫ್ ಗೆ ಎಚ್ಚರವಾದಾಗ ಕಳ್ಳನು ಹಿಂದಿನ ಬಾಗಿಲಿನಿಂದ ಓಡಿ ಪರಾರಿಯಾಗಿದ್ದಾನೆ. ತಕ್ಷಣ ಮನೆ ಮಾಲಿಕರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಮತ್ತು ಅರ್ಶದ್ ರವರಿಗೆ ಮಾಹಿತಿ ನೀಡಿ ಅವರು ರಾತ್ರಿಯೇ ಬಂದು ಪೋಲಿಸರಿಗೆ ಮಾಹಿತಿ ನೀಡಿದರು. ಬೆಳ್ತಂಗಡಿ ಪೋಲಿಸರು ರಾತ್ರಿಯೇ ಬಂದು ಪರಿಶೀಲನೆ ನಡೆಸಿದರು. ಬೆಳಿಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದರು.ಇನ್ಸ್ ಪೆಕ್ಟರ್ ಸುಬ್ಬಾಪುರಮಠ ಬೇಟಿ ನೀಡಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ತನಿಖೆ ಮುಂದುವರೆಯುತ್ತಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಎಸ್.ಡಿ.ಎಂ ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಜಿನ್ ಹ್ಯಾಟ್ರಿಕ್ ಮನ್ನಣೆ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
error: Content is protected !!