37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

    Suddi Udaya

    ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    Suddi Udaya

    ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

    Suddi Udaya

    ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

    Suddi Udaya

    ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

    Suddi Udaya

    ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

    Suddi Udaya
    error: Content is protected !!